ಸರಕಾರಿ ಶಾಲೆಗಳಿಗೆ ಪ್ರತಿ ವರ್ಷ 50 ಸಾವಿರ ಮಕ್ಕಳು ‘ಗುಡ್ ಬೈ’
ಆರ್ಟಿಇ ಎಫೆಕ್ಟ್ : ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿತ ಶಿವರಾಮ್ ಬೆಂಗಳೂರು 2016-17ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭೋತ್ಸವದ ದಿನ ಶಾಲಾ ಆವರಣ ಸಿಂಗರಿಸಿ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಹಾರ್ದಿಕ ಸ್ವಾಗತ ಕೋರುವಂತೆ ಸರಕಾರ ಸುತ್ತೋಲೆ ಹೊರಡಿಸಿದ್ದು, ಇನ್ನೊಂದು ಕಡೆ ಪ್ರತಿ ವರ್ಷ ಸರಕಾರ ಶಾಲೆಗೆ 50 ಸಾವಿರ ಮಕ್ಕಳು ಗುಡ್ಬೈ ಹೇಳಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಒಂದೆಡೆ ಇಂಗ್ಲಿಷ್ ವ್ಯಾಮೋಹದಿಂದ ಗ್ರಾಮೀಣ ಮಕ್ಕಳು ಕೂಡ ಖಾಸಗಿ ಶಾಲೆಗಳಿಗೆ ಸೇರ್ಪಡೆಯಾಗುತ್ತಿದ್ದರೆ, ಮತ್ತೊಂದೆಡೆ ಶಿಕ್ಷಣ ಹಕ್ಕು ಕಾಯಿದೆ (ಆರ್ಟಿಇ) ಮೂಲಕ ಅಲ್ಪಧಿಸಂಖ್ಯಾಧಿತಧಿವಲ್ಲದ ಅನುಧಿದಾಧಿನಧಿರಧಿಹಿತ ಶಾಲೆಧಿಗಧಿಳಿಗೆ ಸೇರ್ಪಡೆಯಾಗುವ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಸರಕಾರವೇ ಶುಲ್ಕ ಭರಿಸುವ ಮೂಲಕ ಪರೋಕ್ಷವಾಗಿ ಖಾಸಗಿ ಶಾಲೆಗಳಿಗೆ ಉತ್ತೇಜನ ನೀಡುತ್ತಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಈ ವರ್ಷ ಕೂಡ ಆರ್ಟಿಇ ಮೂಲಕ 1,01,315 ಮಕ್ಕಳಿಗೆ ಸರಕಾರವೇ ಶುಲ್ಕ ಭರಿಸುತ್ತಿದೆ. ಇದರಿಂದ ವರ್ಷದಿಂದ ವರ್ಷಕ್ಕೆ ಸರಕಾರಕ್ಕೆ 100 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುತ್ತಿದೆ. ಕಳೆದ ವರ್ಷ ಕೂಡ ಸರಕಾರ ಈ ಉದ್ದೇಶಕ್ಕಾಗಿ 316 ಕೋಟಿ ರೂ. ಶುಲ್ಕ ಭರಿಸಿದೆ. ಆರ್ಧಿಟಿಇ ಕಾಯಿದೆ ಸೆಕ್ಷನ್ (12)(1)(ಸಿ) ಅನ್ವಯ ಅವಧಿಕಾಶ ವಂಚಿಧಿತರು ಹಾಗೂ ದುರ್ಬಲ ವರ್ಗಧಿದಧಿವರ ಮಕ್ಕಧಿಳಿಗೆ ಉಚಿತವಾಗಿ ಶೇ 25ರಷ್ಟು ಸೀಟುಧಿಗಳನ್ನು ಮೀಸಧಿಲಿಧಿಡಧಿಲಾಗುತ್ತದೆ. ಆದರೆ, ಉಳ್ಳವರು ಕೂಡ ಇದರ ದುರ್ಬಳಕೆಗೆ ಇಳಿದಿರುವುದು ಬೆಳಕಿಗೆ ಬಂದಿದೆ. ಕೆಲವರು ನಕಲಿ ಜಾತಿ ಪ್ರಮಾಣ ಸಲ್ಲಿಸಿರುವುದನ್ನೂ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪತ್ತೆ ಮಾಡಿದೆ. ”ಆರ್ಟಿಇ ಪ್ರವೇಶಕ್ಕೆ ಮಿತಿ ಹೇರಬೇಕು. ಹೆಚ್ಚಿನ ನೆರವನ್ನೂ ಸರಕಾರ ನೀಡದೆ ಅದನ್ನು ಸರಕಾರಿ ಶಾಲೆಗಳ ಪ್ರಗತಿಗೆ ಬಳಸಬೇಕು,” ಎಂದು ಹೆಸರೇಳಲಿಚ್ಛಿಸದ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಹೆಚ್ಚುವರಿ ಶಿಕ್ಷಕರ ಹೊರೆ: ಈ ನಡುವೆ, ಸರಕಾರಿ ಶಾಲೆಗೆ ಸೇರುವ ಮಕ್ಕಳ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ವಿದ್ಯಾರ್ಥಿ- ಶಿಕ್ಷಕರ ಅನುಪಾತದಂತೆ ಹೆಚ್ಚುವರಿ ಶಿಕ್ಷಕರ ಸಂಖ್ಯೆಯೂ ಹೊರೆಯೂ ಸರಕಾರಕ್ಕೆ ಹೆಚ್ಚುತ್ತಿದೆ. 2016-17ನೇ ಸಾಲಿನಲ್ಲಿ ಜಿಲ್ಲಾ ಶೈಕ್ಷಣಿಕ ಮಾಹಿತಿ ವ್ಯವಸ್ಥೆ (ಡೈಸ್)ಯ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ 13,633 ಹೆಚ್ಚುವರಿ ಶಿಕ್ಷಕರಿದ್ದಾರೆ ಎಂದು ಗುರುತಿಸಲಾಗಿದೆ. ಈ ರೀತಿ ಹೆಚ್ಚುವರಿಯಾಗಿರುವ ಶಿಕ್ಷಕರನ್ನು ಅಗತ್ಯವಿರುವ ಶಾಲೆಗಳಿಗೆ ಮರು ಹಂಚಿಕೆ ಮಾಡುವಂತೆ ಈಗಾಗಲೇ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ. ನೆರವಿಗೆ ಬಾರದ ಸರಕಾರದ ಭಾಗ್ಯ ಮತ್ತೊಂದೆಡೆ ಸರಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆ ಮೂಲಕ ಹಾಲು, ಸಮವಸ್ತ್ರ, ಶೂ ಮತ್ತಿತರ ಸೌಲಭ್ಯಗಳನ್ನು ಒದಗಿಸುತ್ತಿದ್ದರೂ ಪ್ರಯೋಜನವಾಗುತ್ತಿಲ್ಲ. ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿರುವ ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರ್ಪಡೆ ಮಾಡುತ್ತಿರುವುದು ಸರಕಾರಿ ಶಾಲೆಗಳ ಅಧೋಗತಿಗೆ ಕಾರಣವಾಗುತ್ತಿದೆ. ಸರಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಸರಕಾರ ಪೂರಕ ವಾತಾವರಣ ನಿರ್ಮಿಸಬೇಕೆನ್ನುವುದು ಶಿಕ್ಷಣ ತಜ್ಞರ ಅಭಿಪ್ರಾಯ. ಇತ್ತೀಚೆಗೆ ನಡೆದ ಸಭೆಯಲ್ಲಿ ಖಾಸಗಿ ಶಾಲೆಗಳಲ್ಲೂ ನರ್ಸರಿ ಮಾದರಿಯ ಶಿಕ್ಷಣ ನೀಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾದವ್ ಅವರಿಗೆ ಸೂಚನೆ ನೀಡಿ, ಸರಕಾರಿ ಶಾಲಾ ಮಕ್ಕಳ ಪ್ರವೇಶ ಕುರಿತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತರಿಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇಂಗ್ಲಿಷ್ ಮಾಧ್ಯಮ ಶುರು ಮಾಡಲಿ: ”ಖಾಸಗಿ ಶಾಲೆಗಳತ್ತ ಮಕ್ಕಳು ವಲಸೆ ಹೋಗುವುದನ್ನು ತಪ್ಪಿಸಬೇಕಾದರೆ ಸರಕಾರಿ ಶಾಲೆಗಳಲ್ಲೂ ಒಂದು ಭಾಷೆಯಾಗಿ ಇಂಗ್ಲಿಷ್ ಕಲಿಸುವುದು ಅನಿವಾರ್ಯ. ಕೇರಳದಲ್ಲಿ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಹೀಗಾಗಿ, ಅಲ್ಲಿನ ಸರಕಾರಿ ಶಾಲೆಗಳು ಮಕ್ಕಳಿಂದ ತುಂಬಿ ತುಳುಕುತ್ತಿವೆ. ತಮಿಳುನಾಡಿನಲ್ಲೂ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಲಾಗಿದೆ. ಆದರೆ, ತಮಿಳು ಕಲಿಯುವುದು ಅನಿವಾರ್ಯ. ಅದೇ ರೀತಿ, ಕರ್ನಾಟಕದಲ್ಲೂ ಇಂಗ್ಲಿಷ್ ಅನ್ನು ಒಂದು ಭಾಷೆಯಾಗಿ ಕಲಿಸಿದರೆ ಸೂಕ್ತ,” ಎಂದು ತಜ್ಞರು ಸಲಹೆ ಮಾಡುತ್ತಾರೆ. — ಸರಕಾರಿ ಶಾಲೆಗಳ ಸಬಲೀಕರಣವೇ ಎಲ್ಲದಕ್ಕೂ ಮದ್ದು. ಖಾಸಗಿಯಂತೆ ಸರಕಾರಿ ಶಾಲೆಗಳಲ್ಲೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು. ಒಂದನೇ ತರಗತಿಯಿಂದ ಒಂದು ಭಾಷೆಯಾಗಿ ಇಂಗ್ಲಿಷ್ ಕಲಿಸಲು ಈಗಾಗಲೇ ಸರಕಾರದ ಆದೇಶ ನೀಡಿದ್ದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಮೊದಲು ಶಿಕ್ಷಕರಿಗೆ ಇಂಗ್ಲಿಷ್ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಆನಂತರ ಮಕ್ಕಳಿಗೆ ಕಲಿಸಬೇಕು. ಇದರಿಂದ ಖಾಸಗಿ ಶಾಲೆಗಳ ವ್ಯಾಮೋಹ ತಪ್ಪಿಸಬಹುದು
– ಡಾ.ಎಲ್. ಹನುಮಂತಯ್ಯ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ.