Deepawali special ದೀಪಾವಳಿ ವಿಶೇಷ.

image

ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು.
ಕಹಿ ನೆನಪುಗಳನ್ನ ಹಣತೆ ಹಚ್ಹೊದ್ರ ಮೂಲಕ ಸುಟ್ಟು ಹಾಕ್ಬಿಡಿ.
ಹೊಸ ನೆನಪುಗಳೊಂದಿಗೆ ಸಿಹಿ ಬದುಕು ಆರಂಭವಾಗಲಿ
  ಎಲ್ಲರ ಬಾಳಲ್ಲೂ ಈ ದೀಪಾವಳಿ ಹೊಸ ಬೆಳಕು ಚೆಲ್ಲಲಿ…

ದೀಪಾವಳಿ:

ಸಂಭ್ರಮ ಮತ್ತು ನಿರೀಕ್ಷೆಗಳಿಂದ ಕಾದಿರುವ ಹಬ್ಬ. ದೀಪಾವಳಿ ಅಂದರೆ ಅದು ಕೇವಲ ಹಬ್ಬವಲ್ಲ; ಅದು ಸಮಗ್ರ ಕುಟುಂಬಕ್ಕೆ ಆನಂದ ಮತ್ತು ಚೈತನ್ಯವನ್ನು ನೀಡುವ ಸಂದರ್ಭ. 

ಸಮಗ್ರ ಕುಟುಂಬವನ್ನು ತನ್ನ ಪರಿಸರದ ಜತೆ ಬೆಸೆದು ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವಂತೆ ಮಾಡುವ ಸಂದರ್ಭವೂ ಹೌದು.

ದೀಪಾವಳಿ ಅರ್ಥ ಏನು?
ದೀಪಾವಳಿ ಎನ್ನುವ ಶಬ್ದವು ದೀಪ ಮತ್ತು ಆವಳಿ ಹೀಗೆ ರೂಪುಗೊಂಡಿದೆ. ಇದರ ಅರ್ಥ ದೀಪಗಳ ಸಾಲು ಎಂದಾಗಿದೆ. ಆಶ್ವಯುಜ ಕೃಷ್ಣ ತ್ರಯೋದಶಿ (ಧನತ್ರಯೋದಶಿ), ಆಶ್ವಯುಜ ಕೃಷ್ಣ ಚತುರ್ದಶಿ (ನರಕಚತುರ್ದಶಿ), ಅಮಾವಾಸ್ಯೆ (ಲಕ್ಷಿ ಪೂಜೆ) ಮತ್ತು ಆಶ್ವಯುಜ ಶುಕ್ಲ ಪಾಡ್ಯ (ಬಲಿಪಾಡ್ಯ) ಈ ನಾಲ್ಕು ದಿನಗಳ ಕಾಲ ದೀಪಾವಳಿಯನ್ನು ಆಚರಿಸಲಾಗುತ್ತದೆ. ಕೆಲವರು ತ್ರಯೋದಶಿ ಯನ್ನು ದೀಪಾವಳಿಯಲ್ಲಿ ಸೇರಿಸದೇ ಉಳಿದ ೩ ದಿನಗಳನ್ನು ದೀಪಾವಳಿಯೆಂದು ಆಚರಿಸುತ್ತಾರೆ. ಗೋವತ್ಸದ್ವಾದಶಿ ಮತ್ತು ಸಹೋದರ ಬಿದಿಗೆಯು ದೀಪಾವಳಿಯ ಸಮಯದಲ್ಲಿಯೇ ಬರುತ್ತದೆ. ಆದುದರಿಂದ ಇದನ್ನು ದೀಪಾವಳಿಯೆಂದೇ ಪರಿಗಣಿಸಲಾಗುತ್ತದೆ.

  ಮೊದಲಾಗಿ ದೀಪಾವಳಿ ಆಚರಣೆ ಬಗ್ಗೆ ಬರೆಯುವುದಿದ್ದರೆ ಮೂಲವಾಗಿ ಪೌರಾಣಿಕವಾಗಿ ಅಂತಹಾ ಮಹತ್ವವಿಲ್ಲದಿದ್ದರೂ ಅಂದಾಜು ೩ ಸಾವಿರ ವರ್ಷದ ಅಧಿಕೃತ ಇತಿಹಾಸವಿದೆ. ಅದು ದೀಪಾವಳಿಯಾಗಿ ಆಚರಣೆಯಲ್ಲಿತ್ತು. ದೀಪಾವಳಿ ಎಂದರೆ “ದೀಪಗಳ ಸಾಲು” ಎಂದರ್ಥ. ದೀಪಗಳ ಸಾಲು ಸಾಲನ್ನೇ ಹಚ್ಚುವ ಉದ್ದೇಶವೇನು? ಅದರ ಹಿನ್ನೆಲೆಯೇನು? ನಂತರ ಅದರ ಹಿಂದೆ ಮುಂದೆ ಸೇರಿದ ನೀರು ತುಂಬುವ ಹಬ್ಬ, ನರಕ ಚತುರ್ದಶಿ, ಬಲೀಂದ್ರಪೂಜಾ, ಲಕ್ಷ್ಮೀಪೂಜಾ, ಯಮದ್ವಿತೀಯ, ಗೋಪೂಜಾದಿಗಳು ಹೇಗೆ ಸೇರಿದವು ಎಂಬುದರ ಬಗ್ಗೆ ಕೂಡ ಚಿಂತಿಸಬೇಕಿದೆ.

ನೀರು ತುಂಬುವ ಹಬ್ಬ :-
ರೈತಪಿ ವರ್ಗವು ಸಾಧಾರಣವಾಗಿ ತಮ್ಮ ಕೃಷಿ ಕೆಲಸದ ಕೊಯ್ಲು ಮುಗಿಸಿದ್ದು ನಂತರ ಈ ಹಬ್ಬ ಆಚರಣೆ ಇರುತ್ತದೆ. ಬತ್ತದ ಕೃಷಿ ಮಾಡುವ ಪ್ರತೀ ಕೆಲಸಗಾರರಿಗೂ ಗೊತ್ತು ಪೈರಿನ ಒಂದು ರೀತಿಯ ಜುಂಗು ಕೃಷಿ ಕಾರ್ಮಿಕರ ಮೈಗಂಟಿಕೊಂಡು ಒಂದು ರೀತಿಯಲ್ಲಿ ಚರ್ಮಕ್ಕೆ ನಾನಾ ರೀತಿಯ ತುರಿಕೆ, ನವೆ, ಕಜ್ಜಿ ಆಗಿರುತ್ತದೆ. ಅವು ದಿನಾ ನಿವಾರಿಸಿಕೊಳ್ಳಲು ಸಾಧ್ಯವಿಲ್ಲದ ಪೈರಿನ ಸೂಕ್ಷ್ಮ ಜುಂಗುಗಳು. ಕೊಯ್ಲಾದ ನಂತರ ಅದನ್ನು ನಿವಾರಿಸಿಕೊಳ್ಳುವ ಒಂದು ಚಿಕಿತ್ಸಾ ಪದ್ಧತಿಯೇ ಈ ನೀರು ತುಂಬುವ ಹಬ್ಬ. (ಅದು ನದಿ, ಕೆರೆ, ತಟಾಕಗಳು) ಆ ನೀರಿನಲ್ಲಿ ಸೊರಕೆ, ಯಗಚಿ, ಅಳಲೆ, ಕಂದಿಲೆ, ಸೊರೆ, ಲೋಳೆರಸವನ್ನು ಬೆರೆಸಿ ಚೆನ್ನಾಗಿ ಕಾಯಿಸಿ ಬೆಳಗ್ಗಿನ ಜಾವ ಮೈತುಂಬ “ತೈಲ” ಹಚ್ಚಿ (ಎಣ್ಣೆಯಲ್ಲ) ಸ್ನಾನ ಮಾಡಿದಾಗ ಆ ಬತ್ತದ ಜುಂಗುಗಳು; ಮೈಯಲಿ ನೆಟ್ಟವುಗಳು ಜಾರಿ ಹೋಗುತ್ತವೆ. ಮೈತುರಿಕೆ ಕಡಿಮೆಯಾಗುತ್ತದೆ. ತೈಲವೆಂದರೆ ಕಾಳು ಮೆಣಸು, ಚಂದ್ರ, ರಕ್ತಬೋಳ, ಚಂದನ, ಲಿಂಬೆ ಹಣ್ಣು ಹಾಕಿ ಕುದಿಸಿದ ಎಣ್ಣೆ. ಸ್ನಾಯುಗಳ ಸೆಳೆತವನ್ನೂ ನಿವಾರಿಸುವ ತೈಲ. ಅದನ್ನೇ “ತೈಲಾಭ್ಯಂಜನ” ಎಂದರು.

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಎಲ್ಲಾ ಆಚರಣೆಗೂ ಧೈವೀಕ ಹಿನ್ನೆಲೆ ಕೊಡುವುದು ಶಿಷ್ಟಾಚಾರ. ಹಾಗಾಗಿನರಕಾಸುರ ವಧೆಯ ಶುದ್ಧ್ಯರ್ಥ ಸ್ನಾನವೆಂದರು. ನರಕಾಸುರ ಭೂಮಿಪುತ್ರ. ವರಾಹಸ್ವರೂಪಿ ನಾರಾಯಣನ ಮಗ. ಇಲ್ಲಿ ಜುಂಗುಗಳೂ ಭೂ ಉತ್ಪನ್ನಗಳೇ. ಕೃಷಿಯಿಂದ ಬಂದದ್ದಲ್ಲ. ಎಲ್ಲರಿಗೂ ತುರಿಕೆ ಒಂದು ವಿಚಿತ್ರ ಕಾಟವೇ. ಆಡಲಾರದ, ಅನುಭವಿಸಲಾರದ ಕಷ್ಟ. ಅದರ ನಾಶವೆಂದರೆ ಸತ್ಯವೇ ಅಲ್ಲವೆ? ಒಟ್ಟಾರೆ ಈ ಶರದೃತುವಿನಲ್ಲಿ ಹೆಚ್ಚಿನವರು ಚರ್ಮ ರೋಗಾದಿ ಬಾಧೆಗಳನ್ನು ಅನುಭವಿಸುವುದು ಸತ್ಯ. ಇನ್ನು ಶ್ರೀಕೃಷ್ಣನು ತನ್ನ ಸರಳ ಜೀವನದಲ್ಲಿಯೂ ಇದನ್ನು ಆಚರಿಸಿ ತೋರಿದ್ದರಿಂದ ಕೃಷ್ಣನಿಗೆ ಈ ದಿನವನ್ನು ಸಮರ್ಪಿಸಿ ಹಬ್ಬ ಆಚರಿಸುವುದು ಸಾಧುವಲ್ಲವೆ? ನಂತರ ಅಮಾವಾಸ್ಯೆಯಂದು ಧನ ಧಾನ್ಯ ಲಕ್ಷ್ಮೀಪೂಜೆ, ಬಲೀಂದ್ರಪೂಜೆ.

ಧನ ಧಾನ್ಯ ಲಕ್ಷ್ಮೀಪೂಜೆ, ಬಲೀಂದ್ರಪೂಜೆ, ಗೋಪೂಜೆ
ರೈತಾಪಿ ವರ್ಗ ತಾವು ಬೆಳೆದ ಧಾನ್ಯಗಳನ್ನು ಒಟ್ಟಾಗಿ ರಾಶಿ ಹಾಕಿ ಗೌರವಿಸುವುದು ಉತ್ತಮ ಸಂಪ್ರದಾಯ. ಹಾಗೇ ಬಲಿಚಕ್ರವರ್ತಿಯ ದಾನ ಪ್ರವೃತ್ತಿಯಿಂದಾಗಿ ಸೋಮಾರಿತನ ಹೆಚ್ಚಿಸಿಕೊಂಡ ಜನರಿಗೆ ಸದ್ಬುದ್ಧಿ ಬೋಧಿಸಿದ. ಕಾಯಕವೇ ಕೈಲಾಸವೆಂದು ಸಾರಿದ ಶುಭದಿನದ ಹಬ್ಬ ಆಚರಣೆಯೂ ಶುಭಪ್ರದವೇ. ಹಾಗೇ ಗೋಪೂಜಾ:- ಹಿಂದಿನ ಕಾಲದಲ್ಲಿ ಸಂಪತ್ತು ಎಂದರೆ ಗೋವುಗಳೇ. ಅವುಗಳ ವಿನಿಮಯವೇ ವ್ಯಾಪಾರವಾಗಿತ್ತು. ಹಾಗಾಗಿ ಧನಲಕ್ಷ್ಮೀಪೂಜೆ,ಭಗಿನೀ ದ್ವಿತೀಯಾ ಅಥವಾ ಯಮದ್ವಿತೀಯ. ಇದೂ ಕೂಡ ಅದರಲ್ಲಿ ಸೇರಿತು. ಧರ್ಮಮೂರ್ತಿಯಾದ ಯಮನಿಗೆ ನಾವೆಲ್ಲಾ ಧರ್ಮ ಆಚರಣೆ ಪೂರ್ವಕ ಭಾಗಿನೇಯತ್ವದಲ್ಲಿ ಭಗಿನಿಯರಾಗಿ ಆಚರಿಸುವ ಹಬ್ಬ ಅರ್ಥಪ್ರದವಲ್ಲವೇ? ನಾವು ತಿನ್ನುವ ಅನ್ನ, ಬಳಸುವ ಶಕ್ತಿ, ನಮಗೆ ಆದರ್ಶ ಪ್ರಾಯರಾದವರ ನೆನಪಿನ ಆಚರಣೆ ನೂರಾರು. ಆಗಿ ಹೋದ ಸತ್ಪುರುಷರು ದೇಶದ ಧರ್ಮದ ಕಣ್ಮಣಿಗಳು. ಹಲವಾರು ಜನ ಅವರ ಹೆಸರಿನಲ್ಲಿ ಒಂದೊಂದು ದೀಪ ಹಚ್ಚಿದರೂ ಸಾವಿರಾರು ಆಗುತ್ತದೆ. ಅದೇ “ದೀಪಾವಳಿ”.

ಇಂತಹಾ ದೇವರ, ಪುಣ್ಯಪುರುಷರ, ಆದರ್ಶ ವ್ಯಕ್ತಿಗಳನ್ನು ನೆನಪಿಸುವ ದಿನವಾಗಿ ಆಚರಿಸುತ್ತಾ ಅವರ ಜೀವನಾದರ್ಶವೇ ದೀಪವೆಂಬ ಅರ್ಥದಲ್ಲಿ ಹಚ್ಚುತ್ತ ಬಂದ ಸಂಸ್ಕೃತಿ ದೀಪಾವಳಿಯಾಯ್ತು. ನಿಧಾನವಾಗಿ ಯಾವುದು ಯಾವುದೋ ಕಾರಣಕ್ಕೆ ಪೌರಾಣಿಕ ಮಹತ್ವ ಪಡೆದುಕೊಂಡಿತು. ಅದು ಹಬ್ಬವಾಗಿ ಆಚರಣೆಗೆ ಬಂತು. ಆದರೆ ಆಗೆಲ್ಲಾ ಈ ಪಟಾಕಿಗಳಿರಲಿಲ್ಲ; ದೀಪಗಳೇ. ದೊಡ್ಡ ದೊಡ್ಡ ದೀಪ, ಎತ್ತರೆತ್ತರದ ದೀಪ ಇವೆಲ್ಲಾ ಇತ್ತು. ಅಂದಾಜು ೨೦೦೦ ವರ್ಷದ ಹಿಂದೆ ಲೋಹಶಾಸ್ತ್ರದಲ್ಲಿ ಉಂಟಾದ ಒಂದು ವಿಶಿಷ್ಟ ಆವಿಷ್ಕಾರದಿಂದ ಅಗ್ನಿದಂಡ = ಈಗಿನ ಮ್ಯಾಗ್ನೇಷಿಯಂ ಕಡ್ಡಿ ಆವಿಷ್ಕಾರಗೊಂಡಿತು. ಈ ವಿಶಿಷ್ಟವಾದ ಲೋಹವು ತನ್ನಲ್ಲಿ ಉಂಟಾದ ಉಷ್ಣತೆಯಿಂದ ತನಗೆ ತಾನೇ ಹತ್ತಿ ಉರಿಯುತ್ತಿತ್ತು. ಆಕರ್ಷಕವಾಗಿತ್ತು. ಅದನ್ನು ಆಗಿನ ಕಾಲದಲ್ಲಿ “ಅಗ್ನಿದಂಡ” ಎನ್ನುತ್ತಿದ್ದರು. ಅದನ್ನು ಉರಿಸುವುದರಿಂದ ಒಂದು ರೀತಿಯ ಪ್ರಖರ ಬೆಳಕು ಬರುತ್ತಿದ್ದುದರಿಂದ ಕೆಲ ರಾಜ ಮಹಾರಾಜರು ತಮ್ಮ ಅರಮನೆಯ ಗೋಪುರದ ಮೇಲೆ ಅದನ್ನು ಉರಿಯುವಂತೆ ಮಾಡಿ ತಮ್ಮ ಹೆಚ್ಚುಗಾರಿಕೆಯೆಂದು ಪ್ರಕಟಿಸುತ್ತಿದ್ದರು. ಆದರೆ ಅದು ಪಟಾಕಿಯಲ್ಲ, ಸ್ಫೋಟಕವಲ್ಲ, ವಿಚ್ಛಿದ್ರಕಾರಿಯೂ ಅಲ್ಲ.

ತೀರಾ ಇತ್ತೀಚೆಗೆ ಅಂದರೆ ೬೦೦ ವರ್ಷದಿಂದ ಈಚೆಗೆ ಈ ಸುಡುಮದ್ದು ತಂತ್ರಜ್ಞಾನ ಬೆಳಕಿಗೆ ಬಂದಿದೆ. ಇದು ಯುದ್ಧಾದಿಗಳಲ್ಲಿ ರಾಜರು ಮಾತ್ರಾ ಬಳಸುತ್ತಿದ್ದ ವಸ್ತು, ಸಾರ್ವಜನಿಕವಾಗಿ ಬಳಕೆಗೆ ಬಂದು ಹತ್ತಿರ ೨೫೦ ವರ್ಷವೂ ಆಗಿಲ್ಲ. ಆದರೆ ಈಗ ಅದು ದೇಶದ ಒಂದ ವಿಚ್ಛಿದ್ರಕಾರಿ ಶಕ್ತಿಯಾಗಿ, ವಾತಾವರಣ ಕೆಡಿಸುವ ದೂಷಿತವಾಗಿ, ವರ್ಷವರ್ಷವೂ ಸಾವಿರಾರು ಮಕ್ಕಳ ಮೃತ್ಯು ಸ್ವರೂಪವಾಗಿ ತೆರೆದುಕೊಂಡಿರುತ್ತದೆ. ಫ್ಯಾಕ್ಟರಿಗಳಲ್ಲಿ, ಸಾಗಾಟದಲ್ಲಿ, ಮಾರಾಟ ಕಾಲದಲ್ಲಿ, ಬಳಕೆಯಾಗುವ ಕಾಲದಲ್ಲಿ, ನಾನಾ ರೀತಿಯಲ್ಲಿ ಎಷ್ಟೋ ಜನರು ಪ್ರಾಣ ಕಳೆದುಕೊಳ್ಳುತ್ತದ್ದಾರೆ. ಇದನ್ನು ತಡೆಯುವಲ್ಲಿ ಸರಕಾರ ನಿಷ್ಕ್ರಿಯವಾಗಿದೆ. ಆದ್ದರಿಂದ ಪ್ರಜೆಗಳೇ ಅದರ ಬಳಕೆ ಮಾಡದೇನೇ ವಾತಾವರಣವನ್ನೂ, ದೇಶವನ್ನೂ, ನಮ್ಮ ಮುಂದಿನ ಪ್ರಜೆಗಳನ್ನೂ ಉಳಿಸಬೇಕಾಗಿದೆ. ಆ ನಿಟ್ಟಿನಲ್ಲಿ ಇಂದಿನ, ಮುಂದಿನ ದೀಪಾವಳಿ ಆಚರಿಸೊಣವೇ? ಒಮ್ಮೆ ಚಿಂತಿಸಿ.

ದೀಪಾವಳಿ (ದೀಪಗಳ ಸಾಲು) ದೀಪಗಳ ಹಬ್ಬ;
ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು.

ಆಚರಿಸುವ ದಿನಗಳು
ಭಾರತದ ಸಾಂಪ್ರದಾಯಿಕ ಪಂಚಾಂಗಗಳು ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿ ಹಬ್ಬ ಸಾಮಾನ್ಯವಾಗಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ.

ಅಮಾವಾಸ್ಯೆಯ ದಿನ ದೀಪಾವಳಿಯ ಹಬ್ಬದ ಕಾಲದಲ್ಲೇ ಉಂಟಾಗುತ್ತದೆ. ಅಮಾವಾಸ್ಯೆಯ ನಿಖರ ದಿನಾಂಕ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ದಿನಗಳಂದು ಆಗಬಹುದು- ಇದರೊಂದಿಗೆ ದೀಪಾವಳಿಯ ದಿನಾಂಕವೂ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆಯಾಗಬಹುದು. ೨೦೦೪ ರಲ್ಲಿ ನವೆಂಬರ್ ೧೨ ರಂದು ಅಮಾವಾಸ್ಯೆ ಬಂದರೆ ಮುಂದಿನ ಎರಡು ವರ್ಷಗಳಲ್ಲಿ ಕ್ರಮವಾಗಿ ನವೆಂಬರ್ ೧ ಮತ್ತು ಅಕ್ಟೋಬರ್ ೨೫ ರಂದು ಆಚರಿಸಲಾಯಿತು.

ಪ್ರಾಮುಖ್ಯತೆ
ಎರಡು ಪೌರಾಣಿಕ ಘಟನೆಗಳು ಮುಖ್ಯವಾಗಿ ದೀಪಾವಳಿಯೊಂದಿಗೆ ಸಂಬಂಧಿತವಾಗಿವೆ:

ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ

ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.

ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ.
ಸಿಕ್ಖ್ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. ೧೬೨೦ ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್‌ನ ಕೋಟೆಯಲ್ಲಿ ಬಂಧಿತರಾಗಿದ್ದ ೫೨ ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.

ದೀಪಾವಳಿಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತಿರ್ದಶಿಯಂದು (ಕ್ರಿ.ಪೂ ೫೨೭ ಅಕ್ಟೋಬರ್ ೧೫) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸಲ್ಪಡುತ್ತದೆ.
ಕ್ರಿ.ಪೂ ೩ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವಂತೆ ಮಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಗಿದ್ದಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು. ತಮ್ಮ ಗುರುವಿನ ಜ್ಜಾನಜ್ಯೋತಿ ಯ ಸಂಕೇತವಗಿ ೧೬ ಗಣ-ಚರ್ಕವರ್ತಿ, ೯ ಮಲ್ಲ ಮತ್ತು ೯ಗಣರಾಜ್ಯದಲ್ಲಿ ದ್ವಾರವನ್ನು ಬೆಳಗಿದರು. ಜೈನರಿಗೆ ಇದು ವರ್ಷದ ಪ್ರಾರಂಭ.

ಆಚರಣೆ
ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.

ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. ಪಟಾಕಿಗಳನ್ನು ಸ್ಫೋಟಿಸುವುದು ದೀಪಾವಳಿಯ ಆಚರಣೆಯ ಒಂದು ಭಾಗವಾಗಿದೆ. ಇದು ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಹೊಲ ತೋಟಗಳಲ್ಲಿ ದೀಪದ ಕಂಬವನ್ನು ಆರತಿ ಮಾಡುವುದರ ಮೂಲಕ ಆಚರಿಸುವರು. ಅನೇಕ ಕಡೆಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ.

ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. ಜೈನ ಧರ್ಮದಲ್ಲಿ ದೀಪಾವಳಿಯನ್ನು ಕಾರ್ತಿಕ ಮಾಸದ ೩ ದಿನ ಆಚರಿಸುತ್ತಾರೆ.

ಮನೆಯ ದ್ವಾರವನ್ನು ದೀಪದಿಂದ ಬೆಳಗುವುದರ ಜೊತೆಗೆ ಈ ಸಮಯದಲ್ಲಿ ಮಹಾವೀರರ ಉಪದೇಶಗಳನ್ನೊಳಗೊಂಡ ಉತ್ತಾರಾಧ್ಯಾಯನ ಸ್ತೋತ್ರದ ಪಠಣೆ ಮಾಡುತ್ತಾರೆ. ಕೆಲವರು ಮಹಾವೀರರ ನಿರ್ವಾಣ ಸ್ಠಳವಾದ ಬಿಹಾರ ರಾಜ್ಯದ ಪಾವಾಪುರಿ ಗೆ ಯಾತ್ರೆ ಕೈಗೊಳ್ಳುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕದ ಪುಸ್ತಕಗಳನ್ನು ಪ್ರಾರಂಭಿಸುತ್ತಾರೆ.

ಸಂಗ್ರಹ: ಪಿ.ಡಿ.ಪೋತರದ.

ಸುರಕ್ಷಿತ ಬ್ಯಾಂಕಿಂಗ್ ಹೇಗೆ?

ಸುರಕ್ಷಿತ ಬ್ಯಾಂಕಿಂಗ್ ಬಗ್ಗೆ.
✍🏻 ನಾ.ದ.ನಡೋಣಿ

1) ಭಾರತದಲ್ಲಿ ಜೂನ್ ತಿಂಗಳಿನಲ್ಲಿ 32 ಲಕ್ಷ accounts hack ಚೀನಾ , ಅಮೇರಿಕದಲ್ಲಿ ಹಣ draw ಆಗಿವೆ.. ಇದು ಭಾರತಕ್ಕೆ ಬ್ಯಾಂಕಿಂಗ್ software ಒದಗಿಸುವ huawai companyಯಿಂದ ಆಗಿರುವ ಸೈಬರ್ ಬದ್ರತಾ ಲೋಪ,,, ಬ್ಯಾಂಕ್ ಗಳು 4 ತಿಂಗಳವರೆಗೆ ಈ ಲೋಪವನ್ನು ಬಚ್ಚಿಟ್ಟಿದ್ದು, ,ಇದೀಗ ಗ್ರಾಹಕರ complaints ಮೂಲಕ ಬಯಲಾಗಿದೆ.

  • Accounts ಹೇಗೆ hack ಆದವು ?

1) ಬ್ಯಾಂಕ್ ಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ software ಒದಗಿಸುವ huawei ಎಂಬ ಕಂಪನಿಯ ವೆಬ್ ಹ್ಯಾಕ್ ಅಗಿದೆ ಆ ಮೂಲಕ ಮಾಹಿತಿ ಹ್ಯಾಕರ್ಸ ಪಾಲಾಗಿದೆ.

2) ನಾವು ಆನಲೈನ್ ಶಾಪಿಂಗ್ ಮಾಡುವಾಗ ಕೆಲವು ವಸ್ತುಗಳಿಗೆ cash on delivery ಲಭ್ಯವಿರುವುದಿಲ್ಲ, ,, ಆವಾಗ debit / credit card ಬಳಸಿ ಖರೀದಿಸುವಾಗ ನಮ್ಮ ಕಾರ್ಡ್ ನಂ.. ಮತ್ತು ಹಿಂಭಾಗದಲ್ಲಿರುವ 3 digit ಮಾಹಿತಿಯನ್ನು ಒದಗಿಸುತ್ತೇವೆ,,, ಆ ಮಾಹಿತಿಯನ್ನು hackers ಕದಿಯುತ್ತಾರೆ,,, ಮತ್ತು ಅದನ್ನು ಶಾಪಿಂಗ್ ಮತ್ತು ಹಣ transfer ಮಾಡುತ್ತಾರೆ,,

3)online banking ನಲ್ಲಿ ಬ್ಯಾಂಕ್ ಪೂರ್ಣ ಅಡ್ರೆಸ್ ಟೈಪ್ ಮಾಡದೇ ಗೂಗಲ್ ನಲ್ಲಿ ಬರುವ ಬ್ಯಾಂಕ್ ವೆಬ್ ಭೀಟಿ ನೀಡಿದಾಗ.

4) online banking ನಲ್ಲಿ https//: ನಿಂದಲೇ ಟೈಪ್ ಮಾಡಿ ಬ್ಯಾಂಕ್ ವೆಬ್ ಗೆ ಹೋಗಬೇಕು, ಇದರಲ್ಲಿ s ಅಂದ್ರೆ secure

5) email id, ,, facebook ನಲ್ಲಿ ಬರುವ ಅಶ್ಲೀಲ ಚಿತ್ರ,, ವಿಡಿಯೋ,, ಅಥವಾ ಉಚಿತ ಮೋಬೈಲ/ ಮೆಮರಿ ಕಾರ್ಡ ಈ ಥರದ ಲಿಂಕ್/ blink ಆಗುತ್ತಿರುವ ads, ,, spam/ virus/ malware ಆಗಿರುತ್ತವೆ,, ಅವುಗಳ ಆಕರ್ಷಣೆಯಿಂದ ಅಲ್ಲಿ tap ಮಾಡಿದ್ರೆ ಸಾಕು,,, ಅವು ನಮ್ಮೆಲ್ಲಾ ಮಾಹಿತಿಯನ್ನು fraction of second ನಲ್ಲಿ ಕದಿಯುತ್ತವೆ.

5) ಸಾರ್ವಜನಿಕ ಸ್ಥಳಗಳಲ್ಲಿ cctv ಅಳವಡಿಸಿರುವ ಕಛೇರಿ ಸ್ಥಳಗಳಲ್ಲಿ online banking, , online shopping ಮಾಡುವಾಗ ನಮ್ಮ ಅಕೌಂಟ details ಕಳ್ಳರ ಪಾಲಾಗುತ್ತವೆ.

6) account no ಮತ್ತು ಮೊಬೈಲ್ ನಂ,,, ಎರಡನ್ನೂ ಬೇರೆಯವರಿಗೆ ಕೊಡುವುದರಿಂದ.

7) ಬಹಳಷ್ಟು ATM ಕಾರ್ಡಗಳಿಗೆ ಒಂದೆ PIN ಬಳಸಿತ್ತಿದರೆ.

8) ಮುಖ್ಯವಾಗಿ atm card magnetic strip (ಹಿಂಬದಿಯ ಕಪ್ಪು ಪಟ್ಟಿ) ಯಿಂದ,,,hackers atm machineನಲ್ಲಿ ನಾವು card swipe ಜಾಗದಲ್ಲಿ ಚಿಕ್ಕ sensor ಅಳವಡಿಸಿರುತ್ತಾರೆ ಅದರಿಂದ..

9) shopping ಗೆ ಹೋದಾಗ ಅಂಗಡಿಗಳಲ್ಲಿ card swipe ಮಾಡಿ pin press ಮಾಡುವಾಗ

  • ಪರಿಹಾರಗಳು

1)online banking ನಲ್ಲಿ https,//:www. ಈ ರೀತಿ ಪೂರ್ತಿಯಾಗಿ ಬ್ಯಾಂಕ್ ಅಡ್ರೆಸ್ ಟೈಪಿಸಬೇಕು.

2)ಸಾರ್ವಜನಿಕ ಸ್ಥಳ ಗಳಲ್ಲಿ online banking, ,, ಮಾಡಬಾರದು

3) online shopping ನಲ್ಲಿ CODE ಗೆ ಆದ್ಯತೆ ನೀಡುವುದು.

4) ATM PIN ಕಾಲಕಾಲಕ್ಕೆ ಬದಲಿಸುವುದು ಮತ್ತು ನಮ್ಮ ಮೆದುಳಿನಲ್ಲೇ ನೆನಪಿಡುವುದು,,, card ಮೇಲೆ ಬರೆಬಾರದು.

5) magnetic strip ಬದಲಾಗಿ SIM CARD ನಲ್ಲಿರುವ metallic card, ಹೊಂದಿರುವ ಕಾರ್ಡನ್ನು ಬ್ಯಾಂಕ್ ನಿಂದ ಪಡೆಯುವುದು.

6) fake message, ,, link, ,, blinking tags, ,, ,ಆಕರ್ಷಿಸುವ ಅಶ್ಲೀಲ ಚಿತ್ರ,, ವಿಡಿಯೋ ಅನ್ನು ಯಾವುದೇ ಕಾರಣಕ್ಕೂ tap ಮಾಡಬಾರದು.

7) Mobile no, , account no ನ್ನು ಏಕಕಾಲಕ್ಕೆ ನಂಬಲನರ್ಹವಾದ ಜವಾಬ್ದಾರಿರಹಿತ ವ್ಯಕ್ತಿಗಳಿಗೆ ನೀಡಬಾರದು.

8) Facebook ನಲ್ಲಿ ನಿಮ್ಮ ಎಲ್ಲಾ ಖಾಸಗಿ ಮಾಹಿತಿಗಳನ್ನೆಲ್ಲಾ ತುರಕಬೇಡಿ,,,email.,,mobile no etc.

9) mobile allerts active ಮಾಡ್ಕೋಳ್ಳಿ,,, ಹಣ draw ಆದ ತಕ್ಷಣ ಮೆಸೆಜ ಬರುತ್ತೆ,,, ಹೆಚ್ಚಿನ ಹಾನಿಯನ್ನು ತಡೆಬಹುದು.

10) ನಿಯಮಿತವಾಗಿ passbook print ಹಾಕಿಸಿ ಚೆಕ್ ಮಾಡಿ.

ಸಂಬಂಧ ಬೆಸೆಯುವ ಬನ್ನಿ ಹಬ್ಬ.

ಸಂಬಂಧ ಬೆಸೆಯುವ ಬನ್ನಿ ಹಬ್ಬ

image

ಭಾರತದಾದ್ಯಂತ ಬನ್ನಿಗೆ ವಿಶೇಷ ಮಹತ್ವವಿದೆ. ಬನ್ನಿಯನ್ನು ಶುಭದ ಸಂಕೇತವೆಂದು ಪೂಜಿಸುತ್ತಾರೆ. ಕರ್ನಾಟಕದಲ್ಲಿ ಬನ್ನಿ ಮರವನ್ನು ದಸರಾ ಸಂದರ್ಭದಲ್ಲಿ ಭಕ್ತಿಗೌರವಗಳಿಂದ ಪೂಜಿಸುತ್ತಾರೆ. ಬನ್ನಿಯನ್ನು ಬನ್ನಿ, ಶಮೀವೃಕ್ಷವೆಂದೂ, ಅದರ ಎಲೆಗಳನ್ನು ಚಿನ್ನವೆಂದು ಭಾವಿಸುತ್ತಾರೆ. ಬನ್ನಿ ಹಬ್ಬ ಅಥವಾ ಬನ್ನಿ ಮುಡಿಯುವುದು ಎಂದು ಕರೆಯುವುದು ವಾಡಿಕೆ. ಹಿಂದೆ ದಿಗ್ವಿಜಯ ಕೈಗೊಳ್ಳಲು ಸಜ್ಜು ಮಾಡುವ ಮೊದಲ ದಿನವೆಂದು, ಅಂದು ಯುದ್ಧ ಸಾಮಗ್ರಿಗಳಿಗೆ ಪೂಜೆ ಮಾಡಿ ಸೈನ್ಯದೊಡನೆ ಊರ ಮುಂದಿನ ಬನ್ನಿಯ ದಿಬ್ಬಕ್ಕೆ ಸೇರುತ್ತಿದ್ದಂತೆ, ಬನ್ನಿಯ ದಿಬ್ಬದಲ್ಲಿ ಬನ್ನಿಯನ್ನು ಮುಡಿದು ಊರುಗಳಿಗೆ ಬರುತ್ತಿದ್ದರಂತೆ. ವಿಜಯದಶಮಿಯ ಆಚರಣೆಯಲ್ಲಿ ಊರ ದೇವರುಗಳು ಪಲ್ಲಕ್ಕಿಯಲ್ಲಿ ಸಂಚರಿಸಿ, ಬನ್ನಿಕಟ್ಟೆಯಲ್ಲಿ ಸೇರಿ, ಬನ್ನಿಯನ್ನು ಮುಡಿಯುವುದು ಮೇಲಿನ ನಿದರ್ಶನಕ್ಕೆ ಸಾಕ್ಷಿ ಒದಗಿಸಿದೆ.

image

ಉತ್ತರ ಕರ್ನಾಟಕದ ಭಾಗದಲ್ಲಿ ವಿಜಯದಶಮಿಯಂದು ಜನರು ಪತ್ರಿಗಿಡದ ಎಲೆಯಲ್ಲಿ ಬನ್ನಿ ಎಲೆಗಳನ್ನು ಸೇರಿಸಿ ಮಾಡಿದ ವಸ್ತುವನ್ನು ಬಂಗಾರದ ಗಟ್ಟಿ ಎಂದೂ ಭಾವಿಸುತ್ತಾರೆ. ಬನ್ನಿ ಬಂಗಾರದ ಗಟ್ಟಿಯನ್ನು ಹಿಡಿದು ಜನರು ಮನೆ ಮನೆಗೆ ಹೋಗಿ ‘ನಾವು ನೀವು ಬಂಗಾರದಂಗೆ ಇರೋಣ’ ಎಂದು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ. ಅಂದು ಊರಿನ ಗೌಡರು ಹೊಲದಲ್ಲಿಯ ದೇವಿ ಗುಡಿಗೆ ಪಲ್ಲಕ್ಕಿಯಲ್ಲಿ ತೆರಳಿ ಬನ್ನಿಗಿಡವನ್ನು ಪೂಜಿಸಿ, ಬನ್ನಿಯನ್ನು ಮುಡಿಯುತ್ತಾರೆ. ನಂತರ ಊರಿನ ಜನರೆಲ್ಲ ಪರಸ್ಪರ ಬನ್ನಿ ಹಂಚಿಕೊಂಡು ನಲಿಯುತ್ತಾರೆ. ಬನ್ನಿ ಕೊಟ್ಟು ಬಂಗಾರ ಪಡೆಯುವುದು ಎಂದೇ ಪ್ರಸಿದ್ದಿಯಾಗಿರುವ ಹಬ್ಬವು ಹಳಸಿದ ಸಂಬಂಧಗಳನ್ನು ಬೆಸೆಯುತ್ತದೆ. ಅಲ್ಲದೆ ಹೊಸ ಸ್ನೇಹಕ್ಕೂ ಕಾರಣವಾಗುತ್ತದೆ.

ಶ್ರೀರಾಮಚಂದ್ರನಿಗೆ ಪಟ್ಟಾಭಿಷೇಕ ನಡೆದ ಪವಿತ್ರ ದಿನ, ಪಾಂಡವರು ಅಜ್ಞಾತವಾಸ ಮುಗಿಸಿದ ಪವಿತ್ರ ದಿನವೆಂದು ಐತಿಹ್ಯಗಳು ಹೇಳುತ್ತವೆ. ಪಾಂಡವರು ಅಜ್ಞಾತವಾಸ ಹೋಗುವಾಗ ಕಾಡಿನಲ್ಲಿರುವ ಬನ್ನಿಗಿಡದಲ್ಲಿ ತಮ್ಮ ಶಸ್ತ್ರಾಸ್ತ್ರಗಳನ್ನು ಕಟ್ಟಿ, ಅಜ್ಞಾತವಾಸ ಮುಗಿಸಿದಾಗ ಬನ್ನಿ ಗಿಡವನ್ನು ಪೂಜಿಸಿ, ಶಸ್ತ್ರಾಸ್ತ್ರಗಳನ್ನು ಬಿಡಿಸಿಕೊಂಡ ಪವಿತ್ರ ದಿನವೆಂದು ಹೇಳುತ್ತಾರೆ.
ವಿಜಯದಶಮಿಯಂದು ಬೆಳೆಸು ತುಂಬಿದ ಭೂಮಿ, ಕಾಡನ್ನು ಬಿಟ್ಟು ಊರನ್ನು ಸೇರುವುದೆಂದು ಕೃಷಿಕರು ಭಾವಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕೃಷಿಕರು ಹಾಗೂ ವ್ಯಾಪಾರಿಗಳು ಆಯುಧಗಳನ್ನು ಪೂಜಿಸಿ, ಬನ್ನಿ ಸಸಿಯನ್ನು ನೆಟ್ಟು, ನಂತರ ಮುಡಿಯುವ ಪದ್ಧತಿ ಬಂದಿದೆ ಎಂದು ಹೇಳುತ್ತಾರೆ. ಪಾಂಡವರಿಗೆ ಸಂಬಂಧಿಸಿದ ಜನಪದ ಹಾಡು ವಿವರಿಸುವುದು ಹೀಗೆ “ಕಲ್ಲು ಕಡುಬು ಮಾಡಿ, ಮುಳ್ಳು ಸಾವಿಗೆ ಮಾಡಿ, ಬನ್ನಿಯ ಎಲಿಯಾಗೆ ಎಡೆಮಾಡಿ, ಪಾಂಡವರು, ಉಂಡು ಹೋಗ್ಯಾರೊ ವನವಾಸೊ” ಅಂದು ಮಕ್ಕಳು ತಾಯಂದಿರಿಗೆ ಬನ್ನಿ ಮುಡಿಸುವುದರ ಮೂಲಕ ಹಾಗೂ ಹೆಂಡತಿ ಗಂಡನಿಗೆ ಬನ್ನಿ ಮುಡಿಸುವುದರ ಮೂಲಕ ಕೃತಜ್ಞತೆ ಸಲ್ಲಿಸುತ್ತಾರೆ.

ರಾಮಾಯಣ ಹಾಗೂ ಮಹಾಭಾರತದ ಎರಡು ಪ್ರಮುಖ ಘಟನಾವಳಿಗಳಿಗೆ ವಿಜಯದಶಮಿ ಸಾಕ್ಷಿಯಾಗಿ, ಮನುಷ್ಯರಲ್ಲಿನ ದುರ್ಗುಣಗಳ ಸಂಹಾರದ ದ್ಯೋತಕವಾಗಿದೆ. ಶಾಕ್ತೇಯರಿಂದ ‘ಅಪರಂಜಿತಾ’ ಎಂದು ಪೂಜೆಗೊಳ್ಳುತ್ತಿದ್ದ ಬನ್ನಿರಾಮಾಯಣ, ಮಹಾಭಾರತದ ಸಂದರ್ಭದಲ್ಲಿ ಮಾನ್ಯತೆ ಪಡೆದಿತ್ತು. ಶ್ರೀ ರಾಮಚಂದ್ರನು ಶಮಿವೃಕ್ಷವನ್ನು ಪೂಜಿಸಿ, ರಾವಣನ ಮೇಲೆ ಯುದ್ಧಕ್ಕೆ ಹೋದನೆಂದು, ವಿರಾಟನ ಗೋಗ್ರಹಣದ ಸಂದರ್ಭದಲ್ಲಿಯು ಅರ್ಜುನನು ಶಮಿದೇವಿಯನ್ನು ಆರಾಧಿಸಿದನೆಂಬ ಉಲ್ಲೇಖಗಳು ಜನಪದ ಮಹಾಕಾವ್ಯಗಳಲ್ಲಿವೆ.
ಪೌರಾಣಿಕ ಹಾಗೂ ಧಾರ್ಮಿಕ ಹಿನ್ನೆಲೆಯಲ್ಲಿ ಮಹತ್ವದ ಸ್ಥಾನ ಪಡೆದ ಬನ್ನಿಯು ವಿಜಯದ ಸಂಕೇತವಾಗಿ, ಸಂಬಂಧಗಳನ್ನು ಬೆಸೆಯುವ ಸಾಧನವಾಗಿದೆ.

ಬನ್ನಿಯ ಮರವನ್ನು ಉರುವಲಾಗಿ ಉಪಯೋಗಿಸುವುದಿಲ್ಲ. ಹಾಗೆಯೆ ಗಿಡವನ್ನು ವ್ಯಾಪಾರ ಮಾಡುವುದಿಲ್ಲ.ಧಾರ್ಮಿಕವಾಗಿ ಬನ್ನಿ ಮರ ಪವಿತ್ರ ಸ್ಥಾನದಲ್ಲಿದೆ.

ಬನ್ನಿ ಮುಡಿಯುವ ಸಮಯದಲ್ಲಿ ಸಾಮಾನ್ಯವಾಗಿ ಕೇಳಿಬರುವ ಮಾತುಗಳಿವು ↓

” ಬಂಗಾರ ಕೊಟ್ಟು ಬಂಗಾರದ್ಹಾಂಗ ಇರೋಣ್ರಿ… ಕೈ ಹಿಡೀರಿ, ಉಡಿ ಒಡ್ಡರೀ… ಸಾಕು ಅನ್ನುವಷ್ಟು ಬಂಗಾರ ಕೊಡ್ತೀವಿ… ಬಂಗಾರ ರೇಟ್ ಕೇಳಿದ್ರ ಬಂಗಾರ ಅಂಗಡಿ ಮುಂದ್ ನಿಲ್ಲಕ್ಕಾಗಾಂಗಿಲ್ಲ ನಿಮ್ಮ ಮನಿತನಕ ನೀವು ಹೇಳ್ದ ಕೇಳ್ದ ಬಂಗಾರ ತಂದೀವಿ… ಎಷ್ಟು ಬೇಕು ಅಷ್ಟು ತುಗೊಳ್ರಿ…”

ಎಲ್ಲಾ ಸ್ನೇಹಿತರಿಗೆ ವಿಜಯದಶಮಿ ಹಾಗೂ ಮೋಹರಂ ಹಬ್ಬದ ಶುಭಾಶಯಗಳು.
@ಪೋತರಾಜ ಪೋತರದ.

ಪೌರಾಣಿಕ ಕಥೆ:
ಬನ್ನಿ ಬಂಗಾರ.
ಶಮೀವೃತ ಎಂಬ ಬಡ ಬಾಲಕನಿದ್ದ. ತಂದೆ ತಾಯಿಗಳಿಲ್ಲದ ಅನಾಥ, ಆದರೂ ಗುಣ ಸಂಪನ್ನ. ಓದಬೇಕೆಂದ. ಅವನ ಊರಿನ ಹತ್ತಿರ ಸಿಸು ಎಂಬ ಗುರುಕುಲವಿತ್ತು. ಅಲ್ಲಿ ಮಹಾನ ಎಂಬ ಗುರು ಇದ್ದ. ಶಮೀವೃತ ಕಠಿಣ ಪರಿಶ್ರಮಿ. ಗುರುಗಳ ಹತ್ತಿರ ಬಂದು ನಿಷ್ಠೆಯಿಂದ ಅಧ್ಯಯನ ಕೈಗೊಂಡ. ಇವನೊಂದಿಗೆ ಅದೇ ಪ್ರದೇಶದ ಮಹಾರಾಜರ ಮಗನಾದ ವೃಕ್ಷಿತನೆಂಬ ಯುವರಾಜನೂ ಅಲ್ಲಿಯೇ ವೇದಾಧ್ಯಯನ ಮಾಡುತ್ತಿದ್ದ. ಕಲಿಯುವಾಗ ಬಾಗಿಕೊಂಡಿರಬೇಕು, ತಿಂದುಣ್ಣದೇ ಅಕ್ಷ ರ ಪಡೆಯಬೇಕು ಎಂದು ಗುರುಗಳು ಹೇಳುವುದನ್ನು ಹಸಿವೆಯಾದರೂ ಶಮೀವೃತ ಪಾಲಿಸುತ್ತಿದ್ದ. ಆದರೆ ವೃಕ್ಷಿತ ಮಾತ್ರ, ‘ಊಟವಿದ್ದರೆ ಸ್ಫ್ಪೂರ್ತಿ, ಪಾಠ ಪಠಣ ಎಲ್ಲ. ಅದೇ ಇಲ್ಲದಿದ್ದರೆ ವಿದ್ಯಾರ್ಥಿ ಜೀವಂತವಿದ್ದರೂ ಹೆಣದಂತೆ’ ಎನ್ನುತ್ತಿದ್ದ.
ಕೆಲವು ದಿನ ಕಳೆಯಲು ವಿದ್ಯಾಭ್ಯಾಸ ಮುಗಿಯಿತು. ಆಗ ಗುರುಗಳು, ‘ನಾನು ನಿಮ್ಮ ಹತ್ತಿರ ಬಂದಾಗ ನನಗೆ ಬೇಕಾದ ಗುರುಕಾಣಿಕೆ ಕೊಡಿ’ ಎಂದು ಹೇಳಿದರು.
ಒಂದು ದಿನ ಗುರುಗಳು ವೃಕ್ಷಿತನ ಅರಮನೆಗೆ ಬರುತ್ತಾರೆ. ರಾಜನಾಗಿದ್ದ ವೃಕ್ಷಿತನು, ತಾನು ಕೊಟ್ಟಷ್ಟು ಕಾಣಿಕೆಯನ್ನು ಗುರುಗಳಿಗೆ ಇನ್ನು ಮುಂದೆ ಯಾರೂ ಕೊಟ್ಟಿರಬಾರದು, ಹಾಗೇ ತಾನು ಎಷ್ಟು ಶ್ರೇಷ್ಠ ವಿದ್ಯಾರ್ಥಿ ಎಂಬುದು ಗುರುಗಳಿಗೆ ತಿಳಿಯಬೇಕು ಎಂದು ಆನೆಯ ಮೇಲೆ ನಗನಾಣ್ಯ ವಜ್ರ-ಆಭರಣಗಳ ರಾಶಿಯನ್ನೇ ಹೇರಿ ಗುರುಗಳ ಹಿಂದೆ ಕಳಿಸಿದ. ಅಲ್ಲದೇ ಶಮೀವೃತ ಗುರುಗಳಿಗೆ ಏನೂ ಕೊಡಲಾಗಲಿಲ್ಲ ಎಂದು ನೊಂದುಕೊಳ್ಳುವುದನ್ನು ನೋಡಲೆಂದೇ ಗುರುಗಳ ಹಿಂದೆಯೇ ಗೊತ್ತಾಗದಂತೆ ಬಂದ.
ಶಮಿವೃತನು ಗುರುಗಳನ್ನು ಹಣ್ಣು ಹಾಲುಗಳಿಂದ ಸತ್ಕರಿಸಿದ. ಅವರ ಯೋಗಕ್ಷೇಮ ವಿಚಾರಿಸಿದ. ಗುರುಗಳಿಗೆ ತನ್ನ ಹತ್ತಿರ ಕಾಣಿಕೆ ಕೊಡಲು ಏನೂ ಇಲ್ಲವೆಂದು ಗೊತ್ತಿದ್ದರೂ ತನ್ನ ಹತ್ತಿರವಿರುವ ಯಾವುದೇ ವಸ್ತು ಕೇಳಿದರೂ ಕೊಡುವುದಾಗಿ ಹೇಳಿದ.
ಆಗ ಗುರುಗಳು ಅವನ ಗುಡಿಸಲಿನ ಹಿತ್ತಲಿನಲ್ಲಿದ್ದ ಹಸಿರು ಎಲೆಗಳಿಂದ ಸಮೃದ್ಧವಾಗಿದ್ದ ಒಂದು ವೃಕ್ಷ ವನ್ನೇ ಕೊಡಲು ಕೇಳಿದರು. ‘ಗುರುವಿಗಿಂತ ಹಿರಿದು ಮರಣಕ್ಕಿಂತ ಕೊನೆಯದು ಯಾವುದೂ ಇಲ್ಲ’ ಎಂದು ಆ ಮರವನ್ನೇ ಗುರುದಕ್ಷಿಣೆಯಾಗಿ ಕೊಡಲು ಗುರುವನ್ನು ಕರೆದ. ಆಶ್ಚರ್ಯವೆಂಬಂತೆ ಗುರುಗಳು ಮುಟ್ಟಿದ ತಕ್ಷ ಣ ಆ ಗಿಡದ ನಾಣ್ಯದ ಗಾತ್ರದ ಎಲೆಗಳೆಲ್ಲ ಬಂಗಾರದ ಎಲೆಗಳಾದವು. ಹರಿದು ಹರಿದು ಹಾಕಿದಂತೆ ಬಂಗಾರದ ನಾಣ್ಯದ ರಾಶಿಯೇ ಗುಡ್ಡದಂತೆ ಬಿದ್ದರೂ ಮರದ ಒಂದೆಲೆಯೂ ಬರಿದಾಗಲಿಲ್ಲ.
ಕೊಟ್ಟೆನೆಂಬ ಅಹಂ ಇಲ್ಲದೆ ಪ್ರೀತಿಯಿಂದ ಕೊಟ್ಟ ಒಂದೆಲೆಯೂ ಬಂಗಾರಕ್ಕೆ ಸಮ ಎಂದು ಗುರುಗಳು ಹೊಗಳಿದರು. ಅಡಗಿಕೊಂಡ ವೃಕ್ಷಿತನನ್ನು ಕರೆದು, ಚಿನ್ನ ಎಲ್ಲೆಲ್ಲಿಯೂ ಸಿಗUಬಹುದು. ಪ್ರೀತಿ ಸ್ನೇಹ ಸಂಬಂಧಗಳನ್ನು ಹೊನ್ನಿನಿಂದ ಗಳಿಸಲಾಗದು ಎಂದು ಗೆಳೆಯನಲ್ಲಿ ಕ್ಷ ಮೆಯಾಚಿಸಲು ತಿಳಿಸಿದರು. ಇಬ್ಬರೂ ಮರದ ಮಹಿಮೆಯಿಂದ ಒಂದಾದುದಕ್ಕೆ ಆ ಮರಕ್ಕೆ ಶಮೀವೃಕ್ಷ ಎಂದು ಕರೆದರು.
ಅಂದಿನಿಂದ ಶಮೀವೃಕ್ಷ ದ ಎಲೆ ಹಂಚಿಕೊಂಡು ಬಂಗಾರದಂತೆ ಹೋಗೋಣವೆಂಬ ಮಾತು ಜನಜನಿತವಾಯಿತು. ಇಡೀ ನಾಡಿನ ತುಂಬ ಶಮೀವೃತನ ಹೆಸರು ಪ್ರಸಿದ್ದಿಯಾಯಿತು. ಬನ್ನಿ ಬಂಗಾರವಾಗೋಣ ಎಂಬ ಮಾತು ಉಳಿಯಿತು.

ನಿಮಗು ಮತ್ತು ನಿಮ್ಮ ಕುಟುಂಬ ವರ್ಗದವರಿಗೆ ಆಯುಧಪೂಜಾ ಮತ್ತು ವಿಜಯದಶಮಿಯ ಹಾರ್ದಿಕ ಶುಭಾಶಯಗಳು.